Sunday, April 24, 2016

ಕಾಂಗ್ರೆಸ್ ಮುಕ್ತ ಸುಳ್ಯದಲ್ಲಿ ಅರಳಿದ ಕಮಲ

                                 








                     ಸುಳ್ಯ- ಇಂದು ಇದು ರಾಜಕೀಯವಾಗಿ ದಕ್ಷಿಣಕನ್ನಡಕ್ಕೆ ಸೇರಿದರೂ, ಇನ್ನೂ ಕೊಡಗಿನ ಕೆಲವು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಪ್ರದೇಶ. ಕರ್ನಾಟಕದ ಪ್ರಮುಖ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಹೊಂದಿರುವ ತಾಲೂಕು. ಅತ್ತ ಮಂಗಳೂರಿನಂತೆ ಸಮತಟ್ಟಾಗಿರದೆ , ಕೊಡಗಿನಂತೆ ಸಣ್ಣ ಬೆಟ್ಟ-ಗುಡ್ಡ ವನ್ನು ಹೊಂದಿರೋ ಪ್ರದೇಶ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹಸಿರು ಸಿರಿಯಲ್ಲಿ  ಮಲಗಿರುವ ಊರು. ಇಲ್ಲಿನ ಜನ ಸ್ವಾಭಿಮಾನಿಗಳು , 1837 ರಲ್ಲಿ ನಡೆದ ಅಮರ ಸುಳ್ಯದ ರೈತ ದಂಗೆ ಇದಕ್ಕೆ ಸಾಕ್ಷಿ. ಅಂದು ತಮ್ಮನಾಳುತ್ತಿದ್ದ ಬ್ರಿಟಿಷರ ವಿರುದ್ದ ಕಂದಾಯ ಪಾವತಿ , ಕೊಡಗಿನ ಅರಸ ಚಿಕ್ಕವೀರರಾಜೇಂದ್ರನ ಪದಚ್ಯುತಿ ಕಾರಣಕ್ಕಾಗಿ ದಂಗೆ ಎದ್ದ ರೈತರು ಮಂಗಳೂರಿಗೆ ಮುತ್ತಿಗೆ ಹಾಕಿದ್ದರು. ಮೊದಲು ಮಂಗಳೂರನ್ನು ಗೆದ್ದರೂ ನಂತರ ಆಂಗ್ಲರಿಗೆ ಬಿಟ್ಟು ಕೊಡಬೇಕಾಯಿತು.


                  ಸುಳ್ಯದ ಜನ ಪ್ರಜ್ಞಾವಂತರು , ದೇಶದ ಪ್ರತಿ ವಿದ್ಯಮಾನವನ್ನು ಸೂಕ್ಷ್ಮ ಕಣ್ಣಿನಿಂದಲೇ ಗಮನಿಸಿ ತಕ್ಕನಾಗಿ ಪ್ರತಿಸ್ಪಂದಿಸುತ್ತಾರೆ. ೫೦ ವರ್ಷದ ಹಿಂದೆ ಮಲೇರಿಯಾ ಮೊದಲಾದ ರೋಗಗಳಿಂದ , ಬಡತನದಿಂದ ಬಳಲುತ್ತಿದ್ದ ಊರು ಈಗ ಬದಲಾಗಿದೆ .  ಬಹುತೇಕ ಗ್ರಾಮೀಣ ಪ್ರದೇಶವನ್ನು ಹೊಂದಿದ್ದರೂ ಕೂಡ 86.35% ರಷ್ಟು ಸಾಕ್ಷರತೆಯನ್ನು ಹೊಂದಿದೆ. ಅಧುನಿಕ ಸುಳ್ಯದ ನಿರ್ಮಾತೃ ದಿ. ಕುರುಂಜಿ ವೆಂಕಟರಮಣ ಗೌಡರು ಕಟ್ಟಿ ಬೆಳೆಸಿದ ಕೆ.ವಿ.ಜಿ ಕ್ಯಾಂಪಸ್ನಲ್ಲಿ ಎಲ್ಲ ತೆರನಾದ ಶಿಕ್ಷಣದ ವ್ಯವಸ್ಥೆ ಇದೆ. ಇಂಜಿನಿಯರಿಂಗ್ , ಮೆಡಿಕಲ್ , ಆಯುರ್ವೇದ, ದಂತ ವೈದ್ಯಕೀಯ ಕಾಲೇಜ್ ಇದೆ. ೩೦೦೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ಕೆಲವರಲ್ಲಿ ಇನ್ನು ಒಂದು ಭಾವನೆಯಿದೆ ,ಏನೆಂದರೆ ಬುದ್ದಿವಂತರು ಅಥವಾ ಬುದ್ದಿಜೀವಿಗಳ(?) ಪಕ್ಷ ಕಾಂಗ್ರೆಸ್ ಎಂದು. ಅದರೆ ಇಷ್ಟೆಲ್ಲಾ ಶೈಕ್ಷಣಿಕವಾಗಿ ಮುಂದಿರುವ ಊರಲ್ಲಿ ಇಂದು ಕಮಲ ಅರಳಿದೆ ಎಂದರೆ ಅದಕ್ಕೆ ಸುಳ್ಯದ ನಾಗರಿಕರ ಅಜ್ಞಾನ ಕಾರಣವಲ್ಲ ಬದಲಾಗಿ , ದೇಶದ ಮೇಲಿರುವ ಅಭಿಮಾನ ಅವರನ್ನು ಬಿ.ಜೆ.ಪಿ ಯತ್ತ ವಾಲುವಂತೆ ಮಾಡಿದೆ. ಅದಕ್ಕೆ ಇಷ್ಟೆಲ್ಲಾ ಹೇಳಬೇಕಾಗಿ ಬಂತು.


                   ಮೊನ್ನೆ ನಡೆದ ಜಿ. ಪಂ , ತಾ. ಪಂ ಚುನಾವಣೆಗಳಲ್ಲಿ ಬಿ.ಜೆ.ಪಿ ಮತ್ತೆ ಜಯಭೇರಿ ಭಾರಿಸಿತು. ಜಿ.ಪಂ ನ 4 ಕ್ಷೇತ್ರದಲ್ಲಿ 4 ಹಾಗು ತಾ.ಪಂನ 13 ಕ್ಷೇತ್ರದಲ್ಲಿ 9 ರಲ್ಲಿ ಜಯಶಾಲಿ ಆಯಿತು. ಅಲ್ಲದೆ 28 ಗ್ರಾಂ.ಪ ನಲ್ಲಿ  23 ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅಲ್ಲದೆ ಸುಳ್ಯ ಪಟ್ಟಣ ಪಂಚಾಯತ್ ಹಾಗು ಬಹುತೇಕ ಸಹಕಾರಿ ಬ್ಯಾಂಕ್ ಹೀಗೆ ಸಂಪೂರ್ಣ ಕಮಲಮಯವಾಗಿದೆ . ಮೀಸಲು ಕ್ಷೇತ್ರವಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಸತತ 5 ಭಾರಿ ಶಾಸಕ ಎಸ್. ಅಂಗಾರರು ಪ್ರತಿನಿಧಿಸುತ್ತಿದ್ದಾರೆ. 1983 ರಲ್ಲಿ ಬಾಕಿಲ ಹುಕ್ರಪ್ಪರು ಮೊದಲ ಭಾರಿಗೆ ಬಿ.ಜೆ.ಪಿ ಯಿಂದ ಆಯ್ಕೆಯಾದರು. ನಂತರ ಮತ್ತೆ ಕಾಂಗ್ರೇಸ್ ವಶವಾದ ಕ್ಷೇತ್ರವನ್ನು 1994 ರಲ್ಲಿ ಗೆದ್ದ ಅಂಗಾರರು ನಂತರ ಸತತವಾಗಿ ಗೆಲ್ಲುತ್ತಲೇ ಬಂದಿದ್ದಾರೆ.


             2013 ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅದಿಕಾರಕ್ಕೆ ಬಂದಿತ್ತು. ಸ್ವಜನ ಪಕ್ಷಪಾತ,   ಭ್ರಷ್ಟಚಾರ , ಹಗರಣಗಲಿಂದಾಗಿ ಕರಾವಳಿ ಕರ್ನಾಟಕದಲ್ಲಿ ಬಿ.ಜೆ.ಪಿ ಮಕಾಡೆ ಮಲಗಿತ್ತು. ದಕ್ಷಿಣ ಕನ್ನಡದ ವಿಧಾನಸಭಾ 8 ಕ್ಷೇತ್ರದಲ್ಲಿ 7 ಕಾಂಗ್ರೆಸ್ ಪಾಲಾಗಿತ್ತು. ಆದರೆ ಸುಳ್ಯ ವಿಧಾನಸಭಾ ಕ್ಷೇತ್ರ  'ಕೈ'ಗೆಟಕಲೇ ಇಲ್ಲ. 1000ಕ್ಕೂ ಹೆಚ್ಚು ಮತಗಳಿಂದ ಸುಳ್ಯದಲ್ಲಿ ಗೆದ್ದ ಬಿ.ಜೆ.ಪಿ ಕ್ಲೀನ್ ಸ್ವೀಪ್ ಮಾಡುವ ಕಾಂಗ್ರೆಸ್ ಆಸೆಗೆ ತಣ್ಣಿರೇರಚಿತು. ಅಂಗಾರರ ಸರಳ ಸ್ವಭಾವ, ಭ್ರಷ್ಟಾಚಾರ ಮುಕ್ತ ಬದುಕು ಅವರನ್ನು 22 ವರ್ಷಗಳಿಂದ ಶಾಸಕರನ್ನಾಗಿ ಮಾಡಿದೆ. ಅಂತೆಯೇ ರಾಜ್ಯದ ಮಾಜಿ ಮುಖ್ಯಮಂತ್ರಿ , ಹಾಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡರ ಹುಟ್ಟಿದ ಊರು. ಹಾಗೇ ಮಾಜಿ ಇಂಧನ ಸಚಿವೆ , ಉಡುಪಿ- ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ ಯವರ ತವರೂರು ಸುಳ್ಯ. ಅಗೊಮ್ಮೆ-ಈಗೊಮ್ಮೆ  ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರು ಸಹ ಬಿ.ಜೆ.ಪಿ ಕೈ ಬಿಟ್ಟಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ರಿಗೆ 25,000 ಮತಗಳ ಮುನ್ನಡೆ ದೊರಕಿಸಿಕೊಟ್ಟ ಸುಳ್ಯ ಕಾಂಗ್ರೆಸ್ ನಾಯಕರ ಪಾಲಿಗೆ ಬಿಸಿತುಪ್ಪವಾಗಿದೆ. ಸುಳ್ಯದ ಈ ವಿಜಯಗಳಿಗೆ ಬಿ.ಜೆ.ಪಿ  ಮಾತೃಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಾತ್ರ ಬಹಳವಿದೆ . ಸಂಘದ ಶಾಖೆಗಳ ಮೂಲಕ ಇಂದಿಗೂ ಯುವಜನರಲ್ಲಿ ರಾಷ್ರಭಕ್ತಿ ಮೂಡಿಸುತಿದೆ.


          ಯಾವ ಟಿಪ್ಪು ಜಯಂತಿಯ ಕಾರಣಕ್ಕೆ ಕೊಡಗಿನಲ್ಲಿ ಮೊನ್ನೆ ಬಿ.ಜೆ.ಪಿ ಗೆ ಜನ ಮತ ಕೊಟ್ಟರೋ , ಅದರ ಪ್ರಭಾವ ಸುಳ್ಯದ ಮೇಲಾಗಿದೆ.  ಏಕೆಂದರೆ ಒಂದು ಕಾಲದಲ್ಲಿ ಟಿಪ್ಪು ಕೂಡ ಸುಳ್ಯದ ಮುಖಾಂತರ ದಂಡಯಾತ್ರೆ ಮಾಡಿದವನೆ . ತನ್ನ ನೆತ್ತಿ ಮೇಲಿರುವ ಕೊಡಗಿನಂತೆ ಎಲ್ಲ ಕಡೆ ಬಿ.ಜೆ.ಪಿ ಸದಸ್ಯರನ್ನು ಹೊಂದಿರುವ ಸುಳ್ಯ ಕಾಂಗ್ರೆಸ್ ಮುಕ್ತವಾಗುವತ್ತ ಹೊರಟಿದೆ. ಎಂದೋ ನಡೆಯುವ ಬಂದ್ ಗಳನ್ನೂ ಗಲಭೆಯೇನೋ ಎಂಬಂತೆ ಬಿಂಬಿಸುವವರ ಮದ್ಯೆ ,  ಬಿ.ಜೆ.ಪಿ ಕೊಮುವಾದಿಯಂತೆ , ಜಾತಿವಾದಿಯಂತೆ ಎನ್ನುವ ಅಂತೆ ಕಂತೆಗಳ ನಡುವೆ ಸುಳ್ಯ ನಿಶ್ಚಿಂತೆಯಾಗಿದೆ. ದೆಹಲಿಯ ಆಗು-ಹೋಗುಗಳಿಗೆ ಧ್ವನಿಯಾಗುತ್ತ



                                                                                                         -Tharanatha Sona